ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ರವರು ಭಾರತ ಮಾತೆಗೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೋದಿ ಸರಕಾರದ ಜನಪರ ಯೋಜನೆಗಳ ಬಗ್ಗೆ, ದೂರದೃಷ್ಟಿತ್ವದ ಕುರಿತು ಮಾತಾನಾಡಿದರು.
ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ಕುರಿತು ಮಾರ್ಗದರ್ಶನ ನೀಡಿದರು. ದೇಶಕ್ಕೆ ಭ್ರಷ್ಟಾಚಾರ ರಹಿತವಾದ ಉತ್ತಮ ಆಡಳಿತವನ್ನು ನೀಡಬೇಕೆಂದು ಬಿಜೆಪಿ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳಿಗೆ ಬೆಂಬಲವಾಗಿ ನಿಂತು ದೇಶಾದ್ಯಂತ ಹೋರಾಟ ಮಾಡುತ್ತಿದೆ ಎಂದರು.
ನಗರಸಭಾಧ್ಯಕ್ಷ ಜೀವಂಧರ್ ಜೈನ್ ರವರು ಮಾತನಾಡಿ, ವಾರ್ಡ್ ಗಳಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧರಾಗಬೇಕಾಗಿ ಕರೆ ನೀಡಿದರು. ಮಂಗಳೂರು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆಯವರು ಮಾತಾಡಿ ಬೂತ್ ಗಳಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು.
ಜಿಲ್ಲಾ ಸಮಿತಿಯ ಸದಸ್ಯ ರಾಜೇಶ್ ಬನ್ನೂರು, ಬಪ್ಪಳಿಗೆ ಚಂದ್ರಶೇಖರ ರಾವ್ ಮೊದಲಾದವರು ಪಕ್ಷ ಸಂಘಟನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಭಾಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ಕೇಂದ್ರ ಸರಕಾರ 8 ವರ್ಷಗಳು ಸಂಪೂರ್ಣಗೊಂಡ ಸಂಭ್ರಮಾಚರಣೆಯ ಸೇವೆ, ಸುಶಾಸನ , ಬಡವರ ಕಲ್ಯಾಣ ಕಾರ್ಯಕ್ರಮವನ್ನು ಮಂಡಲದಲ್ಲಿ ಯಶಸ್ವಿಯಾಗಿ ಎಲ್ಲಾ ಕಾರ್ಯಕರ್ತರ ಸಹಕಾರದಿಂದ ನಡೆಸಿದ ಬಗ್ಗೆ ವರದಿ ನೀಡಿ, ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ನಗರಸಭಾ ಸದಸ್ಯೆ ಗೌರೀ ಬನ್ನೂರು ರವರ ಪ್ರಾರ್ಥನೆಯಿಂದ ಆರಂಭವಾದ ಸಭೆಯಲ್ಲಿ , ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷೆ ಜ್ಯೋತಿ ಆರ್ ನಾಯಕ್ ವಂದಿಸಿದರು. ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಉಪಾಧ್ಯಕ್ಷ ಇಂದು ಶೇಖರ್ ಕಾರ್ಯಕ್ರಮ ನಿರ್ವಹಿಸಿದರು.