ಮಹಾರಾಷ್ಟ್ರ: ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದ ಬೆನ್ನೆಲ್ಲೇ ಗೋವಾದ ಖಾಸಗಿ ಹೋಟೆಲ್ನಲ್ಲಿದ್ದ ಏಕನಾಥ್ ಶಿಂಧೆ ಬಣದ ಶಾಸಕರು ಹಾಗೂ ಬಿಜೆಪಿ ಶಾಸಕರು ಸಂಭ್ರಮಾಚರಣೆ ಮಾಡಿದರು.
ಫೇಸ್ಬುಕ್ ಲೈವ್ನಲ್ಲಿ ತನ್ನ ನಿರ್ಧಾರ ಪ್ರಕಟಿಸಿದ ಠಾಕ್ರೆ , ಸಿಎಂ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಈ ಮೂಲಕ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನವಾಗಿದೆ. ಇದರಿಂದ ನಾಳೆ ನಡೆಯುವ ವಿಶ್ವಾಸಮತ ಯಾಚನೆ ರದ್ದಾಗಿದ್ದು, ಏಕನಾಥ್ ಶಿಂಧೆ ಬಣದ ಶಾಸಕರು ಹಾಗೂ ಬಿಜೆಪಿ ಶಾಸಕರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಶಾಸಕರು ದೇವೇಂದ್ರ ಫಡ್ನವಿಸ್ಗೆ ಘೋಷಣೆ ಕೂಗಿ ಸಂಭ್ರಮಿಸಿದರು.