ಪುತ್ತೂರು: ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ಕಾರುಗಳ ನಡುವೆ ಅಪಘಾತ ನಡೆದ ಘಟನೆ ಮುಂಡೂರು ಗ್ರಾಮದ ಪಂಜಳದಲ್ಲಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಜಖಂ ಗೊಂಡಿದ್ದು ಹಲವರಿಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಓಮ್ನಿ ಕಾರ್ ಪುರುಷೋತ್ತಮ್ ಎನ್ನುವವರ ಮನೆಯ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ಸ್ವಿಫ್ಟ್ ಕಾರು ಪುತ್ತೂರು ಪಡೀಲ್ ಅಶೋಕ್ ನವರದ್ದಾಗಿದ್ದು ಚಾಲಕ ತೆಗೆದುಕೊಂಡು ಹೋಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.