ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ತಂದೆ ಮೃತಪಟ್ಟು, ಮಗ ತೀವ್ರ ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರದಲ್ಲಿ ಜು.3 ರಂದು ರಾತ್ರಿ ನಡೆದಿದೆ.
ಮೃತ ಬೈಕ್ ಸವಾರನನ್ನು ಪಂಜುಗುಡ್ಡೆ ನಿವಾಸಿ ರಘುನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಬೈಕ್ ಮತ್ತು ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಘುನಾಥ್ ಶೆಟ್ಟಿ ಸಾವನ್ನಪ್ಪಿದ್ದು, ಸಹ ಸವಾರ ರಘುನಾಥ್ ರವರ ಮಗ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ರಘುನಾಥ್ ಶೆಟ್ಟಿ ಯವರ ಇಬ್ಬರು ಪುತ್ರರು ಇಂಜಿನಿಯರ್ ಗಳಾಗಿದ್ದು, ಮಗ ಅನುಷ್ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಪುತ್ರ ಮೈಸೂರಿನಲ್ಲಿ ಕೆಲಸದಲ್ಲಿದ್ದಾರೆ.
ಬೆಂಗಳೂರಿನಿಂದ ಮನೆಗೆ ಬಂದಿದ್ದ ಮಗ ಅನುಷ್ ಜು.3 ರಂದು ರಾತ್ರಿ ಬೆಂಗಳೂರಿಗೆ ಹೋಗುವವರಾಗಿದ್ದು, ಅವರನ್ನು ಬೆಂಗಳೂರಿಗೆ ಬಸ್ ಬಿಡಲೆಂದು ರಘುನಾಥ್ ಶೆಟ್ಟಿ ರವರು ಮನೆಯಿಂದ ಬೈಕ್ ನಲ್ಲಿ ಕರೆದುಕೊಂಡು ಪುತ್ತೂರಿಗೆ ಬರುತ್ತಿದ್ದ ವೇಳೆ ಕುಂಬ್ರ ಸಮೀಪ ಓಮ್ನಿ ಕಾರೊಂದಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ರಘುನಾಥ್ ಶೆಟ್ಟಿ ರವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಅಪಘಾತದಿಂದಾಗಿ ರಘುರಾಮ ಶೆಟ್ಟಿಯವರ ಮಗನ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.