ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ಚರಂಡಿ, ಮೋರಿಗಳನ್ನು ಸರಿಯಾದ ರೀತಿಯಲ್ಲಿ ನಿರ್ಮಿಸದೆ ರಸ್ತೆಗೆ ನೀರು ಹೋಗುವ ರೀತಿ ಅವ್ಯವಸ್ಥೆಯಲ್ಲಿ ಫಾಸ್ಟ್ ಫುಡ್ ಅಂಗಡಿಯೊಂದನ್ನು ನಿರ್ಮಿಸಿರುವ ಬಗ್ಗೆ ವರದಿ ಪ್ರಕಟಿಸಿದ ತಕ್ಷಣವೇ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು ಅವ್ಯವಸ್ಥೆಯನ್ನು ಸರಿ ಪಡಿಸಿದರು.
ಚರಂಡಿಯಲ್ಲಿ ಹರಿಯಬೇಕಾದ ಕೊಚ್ಚೆ ನೀರು ರಸ್ತೆಯಲ್ಲಿ ಶೇಖರಣೆಯಾಗಿ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದು, ಈ ಬಗ್ಗೆ Zoom.InTv ಯಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು.
ವರದಿಗೆ ತಕ್ಷಣವೇ ಸ್ಪಂದಿಸಿದ ಪಿಡಬ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಗುತ್ತಿಗೆದಾರರು ಜೆಸಿಬಿ ಮೂಲಕ ಸರಿಯಾದ ರೀತಿಯಲ್ಲಿ ಮೋರಿಗಳನ್ನು ನಿರ್ಮಿಸಿ ಅವ್ಯವಸ್ಥೆಯನ್ನು ಸರಿಪಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ..