ಪುತ್ತೂರು: ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ.

ಜು.13 ರಂದು ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಮುರಿದು ಬಿದ್ದಿದೆ.

ಘಟನೆಯಿಂದಾಗಿ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ..



























