ಪುತ್ತೂರು: ಪ್ರವೀಣ್ ರವರ ಪಾರ್ಥಿವ ಶರೀರ ಬೆಳ್ಳಾರೆ ಆಗಮಿಸಿದ್ದು, ಈ ವೇಳೆ ಅಂತಿಮ ದರ್ಶನಕ್ಕಾಗಿ ಶಾಸಕರು, ಸಂಸದರು, ಸಚಿವರು ಆಗಮಿಸಿದ್ದು, ಈ ಸಂದರ್ಭದಲ್ಲಿ ಆಕ್ರೋಶಕ್ಕೆ ಒಳಗಾದ ಕಾರ್ಯಕರ್ತರು ದಿಕ್ಕಾರ ಕೂಗಿದ್ದು, ಸ್ಥಳದಲ್ಲಿ ಗೊಂದಲ ವಾತಾವರಣ ಉಂಟಾದ ಹಿನ್ನೆಲೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಅಂತಿಮ ದರ್ಶನಕ್ಕಾಗಿ ಶಾಸಕರು, ಸಂಸದರು, ಸಚಿವರು ಆಗಮಿಸಿದ್ದು, ಈ ಸಂದರ್ಭದಲ್ಲಿ ಆಕ್ರೋಶಕ್ಕೆ ಒಳಗಾದ ಕಾರ್ಯಕರ್ತರು ಬಿಜೆಪಿ ಹಾಗೂ ಶಾಸಕರು, ಸಂಸದರು, ಸಚಿವರ ವಿರುದ್ಧ ದಿಕ್ಕಾರ ಕೂಗಿದರು. ಈ ವೇಳೆ ಸ್ಥಳದಲ್ಲಿ ಗೊಂದಲಮಯ ವಾತಾವರಣ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಸ್ಥಳದಿಂದ ಚದುರಿಸಿದ್ದಾರೆ ಈ ವೇಳೆ ಓರ್ವ ವ್ಯಕ್ತಿಗೆ ಗಾಯವಾಗಿದೆ ಎಂದು ವರದಿಯಾಗಿದೆ.


























