ಪುತ್ತೂರು: ಪ್ರವೀಣ್ ಹತ್ಯೆಯನ್ನು ಖಂಡಿಸಿ ನಾಳೆ (ಜು.28) ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಆದರೇ ಈ ಬಗ್ಗೆ ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಯಾವುದೇ ಬಂದ್ ಗೆ ಕರೆ ನೀಡಿಲ್ಲ ಎಂದು ಹೇಳಿದೆ.
ಶಾಲಾ-ಕಾಲೇಜು, ಅಂಗಡಿ ಮುಂಗಟ್ಟು, ವಾಹನ ಸಂಚಾರವನ್ನೂ ಸ್ವಯಂ ಪ್ರೇರಿತರಾಗಿ ಬಂದ್ ಮಾಡಬೇಕು ಎಂಬ ಮಾಹಿತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದು ತಪ್ಪಾದ ಮಾಹಿತಿಯಾಗಿದೆ ಹಿಂದೂ ಸಂಘಟನೆ ಯಾವುದೇ ರೀತಿಯ ಬಂದ್ ಗೆ ಕರೆ ನೀಡಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ..



























