ಸುರತ್ಕಲ್: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ(29),ಮೋಹನ್ ಅಲಿಯಾಸ್ ಮೋಹನ್ ಸಿಂಗ್ (26), ಗಿರಿಧರ್ (23),ಅಭಿಷೇಕ್ (21),ಶ್ರೀನಿವಾಸ್ (23), ದೀಕ್ಷಿತ್ (21) ಬಂಧಿತ ಆರೋಪಿಗಳು.

ಕಳೆದ ಗುರುವಾರ ಸುರತ್ಕಲ್ನಲ್ಲಿ ಅಂಗಡಿ ಮುಂದೆ ನಿಂತಿದ್ದ ಫಾಜಿಲ್ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಕಾರನ್ನು ದುಷ್ಕರ್ಮಿಗಳಿಗೆ ನೀಡಿದ್ದ ಅಜಿತ್ ಕ್ರಾಸ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಉಡುಪಿಯಲ್ಲಿ ಹತ್ಯೆಗೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿತ್ತು.
ಪ್ರಕರಣ ಸಂಬಂಧ ಇಂದು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಈ ಸಂಬಂಧ ನಿನ್ನೆ ಮಾಹಿತಿ ನೀಡಿದ್ದ ಮಂಗಳೂರು ಪೊಲೀಸ್ ಆಯುಕ್ತರು, ಪ್ರಕರಣಕ್ಕೆ ಸಂಬಂಧಿಸಿದಂತೆ 51 ಮಂದಿಯನ್ನು ವಿಚಾರಣೆ ನಡೆಸಿ, ಪ್ರಕರಣದ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದರು.
ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಜಿಪಿ – ಐಜಿಪಿ ಪ್ರವೀಣ್ ಸೂದ್, ಮಂಗಳೂರಿಗೆ ಭೇಟಿ ನೀಡಿ ತನಿಖೆಗೆ ಮತ್ತಷ್ಟು ಚುರುಕುಗೊಳಿಸಿದ್ದರು. ತಪ್ಪಿತಸ್ಥರು ಯಾರೇ ಇರಲಿ ಬಿಡುವುದಿಲ್ಲ ಎಂದು ಗುಡುಗಿದ್ದರು.