ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.
ಆ.5 ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9ರ ವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು , ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.