ಪುತ್ತೂರು: ತಾಲೂಕು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘವು ಸತತವಾಗಿ 4ನೇ ಬಾರಿ ಅತ್ಯುತ್ತಮ ಸಹಕಾರಿ ಸಂಘವೆಂಬ ಪ್ರಶಸ್ತಿಗೆ ಭಾಜನವಾಗಿದ್ದು,ಇಂದು ದಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಮಹಾಸಭೆಯ ಸಮಾರಂಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಂಎನ್ ರಾಜೇಂದ್ರ ಕುಮಾರ್ ರವರು ಅತ್ಯುತ್ತಮ ಸಾಧನೆಗೈದ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಹಾಗೂ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಜಯಂತಿ ಭಾಸ್ಕರ್ ರವರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ್ ರೈ, ಸದಾಶಿವ ಉಳ್ಳಾಲ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಸಹಕಾರಿ ಇಲಾಖೆಯ ಜಿಲ್ಲಾ ಉಪ ನಿಬಂಧಕರಾದ ಪ್ರವೀಣ್ ಕುಮಾರ್, ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಸಹಿತ ಹಲವಾರು ಸಹಕಾರಿ ಮುಖಂಡರು ಉಪಸ್ಥಿತರಿದ್ದರು.