ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಕೊವಿಡ್ ದೃಢಪಟ್ಟ ಬಗ್ಗೆ ಟ್ವೀಟ್ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದಿದ್ದಾರೆ.
ಇನ್ನು ನಾನು ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಂದು ಬೊಮ್ಮಾಯಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನೀತಿ ಆಯೋಗದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (@BSBommai) August 6, 2022