ವಿಟ್ಲ: ಕಾರು ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕುದ್ದುಪದವು ಪೆರುವಾಯಿ ರಸ್ತೆಯ ಆದಾಳ ಸಮೀಪದ ತಿರುವಿನಲ್ಲಿ ನಡೆದಿದೆ.
ಕುದ್ದುಪದವು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪೆರುವಾಯಿ ಕಡೆಗೆ ಬರುತ್ತಿದ್ದ ಜೀಪ್ ನಡುವೆ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ..