ನೆಲ್ಯಾಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಆಸ್ವತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.