ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇದರ ಆಶ್ರಯದಲ್ಲಿ ಆಗಸ್ಟ್ 06ರಂದು ನಡೆದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿಶಾಲ್ ಪಿ(ವಿಠಲ.ಪಿ ಮತ್ತು ರೇಷ್ಮಾ ಇವರ ಪುತ್ರ) [30-35ಕೆಜಿ] (9ನೇ ತರಗತಿ) ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ, ಲಿಖಿತ್ ಪಿ( ಚೆನ್ನಪ್ಪ ಗೌಡ ಮತ್ತು ಯಶಕಲಾ ಇವರ ಪುತ್ರ) [50-55ಕೆಜಿ] (10ನೇ ತರಗತಿ) ದ್ವಿತೀಯ ಸ್ಥಾನ, ಅದೈತ್ ಶರ್ಮ( ಸುಧೀರ್.ಬಿ.ಎಸ್ ಮತ್ತು ಲತಾ ಸುಧೀರ್ ಇವರ ಪುತ್ರ) [45-50ಕೆಜಿ] (ಹತ್ತನೇ ತರಗತಿ) ತೃತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ ಕೆ( ಆನಂದ ಗೌಡ.ಕೆ ಮತ್ತು ಪಿ.ದಾಜಮ್ಮ ಇವರ ಪುತ್ರಿ) [44-48ಕೆಜಿ] (10 ನೇ ತರಗತಿ) ತೃತೀಯ ಸ್ಥಾನ ಗಳಿಸಿರುತ್ತಾರೆ.
ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿಶಾಲ್ ಪಿ ರವರು ಕಟೀಲಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.