ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಸುಳ್ಯ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ.
ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರು ಜನರನ್ನು ಬಂಧಿಸಿದ್ದು, ಇದೀಗ ಓರ್ವನನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆ ಬಂಧಿತರ ಸಂಖ್ಯೆ 7ಕ್ಕೇರಿದೆ.
ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ಹತ್ಯೆ ಮಾಡಲಾಗಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು.