ಮಂಗಳೂರು: ಹಿಂದೂ ಜಾಗರಣ ವೇದಿಕೆ ಉಳ್ಳಾಲ ತಾಲೂಕು ಇದರ ಆಶ್ರಯದಲ್ಲಿ 1947 ರ ಆಗಸ್ಟ್ 14 ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ದುರಂತವನ್ನು ನೆನಪಿಸುತ್ತಾ ಕಳೆದು ಹೋದ ಭಾಗಗಳನ್ನು ಮತ್ತೆ ಒಂದುಗೂಡಿಸುವ ಸಲುವಾಗಿ ಜನಜಾಗೃತಿಗಾಗಿ ‘ಅಖಂಡ ಭಾರತ ಸಂಕಲ್ಪ ದಿನ’ ಆ.14 ರಂದು ಸಂಜೆ 3 ಗಂಟೆಗೆ ಬೀರಿ ಜಂಕ್ಷನ್ (ಸಿದ್ಧಿ ವಿನಾಯಕ ಭಜನಾ ಮಂದಿರದ ವಠಾರದ) ಬಳಿ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಚೈತ್ರಾ ಕುಂದಾಪುರ ರವರು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಪ್ರಸಾದ್ ಮಡ್ಯಾರ್ ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ವಕೀಲ ಕೆ. ಸಿ. ನಾರಾಯಣ್ ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.