ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಭೆ ನಡೆಯಿತು. ಸಭೆಯಲ್ಲಿ ಅತ್ಯುತ್ತಮ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪಡೆದಿರುವ ಪುತ್ತೂರು ಬನ್ನೂರು ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ, ಪೆರ್ನೆ ಸಹಕಾರಿ ಸಂಘದ ಅಧ್ಯಕ್ಷರಾದ ತೊಯಜಾಸ ಶೆಟ್ಟಿ, ಬಲ್ನಾಡ್ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಗೌಡರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಉಪಾಧ್ಯಕ್ಷರುಗಳಾದ ಅಶ್ರಫ್ ಬಸ್ತಿಕಾರ್, ಪ್ರಭಾಕರ್ ಭಟ್ ಮಾವೆ, ಶ್ರೀಧರ್ ಶೆಟ್ಟಿ ಪುಣಚ, ಜಯರಾಮ್ ಬಲ್ಲಾಲ್, ಬೀಪಾತುಮ್ಮಾ ಗಡಿಯಾರ್, ನಾರಾಯಣ ಗೌಡ ಬಲ್ನಾಡ್,ಬ್ಲಾಕ್ ಕಾರ್ಯದರ್ಶಿಗಳಾದ ಎಸ್ ಕೆ ಮಹಮ್ಮದ್ ಕುಂಹಿ,ಜಗನ್ನಾಥ ಶೆಟ್ಟಿ ಕೊಡಿಂಬಾಡಿ, ಶರೀಫ್ ರೋಯಲ್ ಬಲ್ನಾಡ್, ವಿಟ್ಲ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್,ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕರೀಂ ಕುದ್ದುಪದವು, ಹಿಂದುಳಿದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಅಸಂಗಟಿತ ಕಾರ್ಮಿಕ ಘಟಕದ ಅಧ್ಯಕ್ಷ ಸೇಸಪ್ಪ ನೆಕ್ಕಿಲ್,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿ ಕೆ ಎಂ ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಪದ್ಮಿನಿ ಸೇರಾಜೆ, ಪೆರುವಾಯಿ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಅಳಿಕೆ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೀತರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ತನಿಯಪ್ಪ ಪೂಜಾರಿ ಪೆರ್ನೆ, ಯಂಗ್ ಬ್ರಿಗೇಡ್ ನ ಉನೈಸ್ ಗಡಿಯಾರ್, ಕಾಂಗ್ರೆಸ್ ಮುಖಂಡರಾದ ನ್ಯಾಯವಾದಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ, ಎಂ ಕೆ ಮೂಸ, ಅಬ್ದುಲ್ ರಹಿಮಾನ್ ಕರಂಬುಳ,ಸಿರಾಜ್ ಪುಣಚ,ಸಂಶುದ್ದೀನ್ ಅಜ್ಜಿನಡ್ಕ ಸುಬ್ರಮಣ್ಯ ಗೌಡ ಕೊಡಿಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.