ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಸೆ.7 ರಿಂದ 9ರ ವರೆಗೆ “ಆರೆಂಜ್ ಅಲರ್ಟ್’ ಘೋಷಿಸಿದೆ.
ಸೆ.10 ಮತ್ತು 11ರಂದು ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಬಿರುಸು ಪಡೆದಿತ್ತು. ಮಂಗಳೂರು ನಗರದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆ ತುಸು ಬಿರುಸು ಪಡೆದಿತ್ತು. ಸೆಕೆಯ ಪ್ರಮಾಣ ಹೆಚ್ಚಿತ್ತು.