ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆಯನ್ನು ನಡೆಸಬಾರದೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ರವರು ದೂರು ನೀಡಿದ್ದು, ಪೂಜಾ ಆಯೋಜಕರು ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಹೈ ಕೋರ್ಟ್ ಆದೇಶ ಹೊರಡಿಸಿದ್ದು, ಭಜನಾ ಕಾರ್ಯಕ್ರಮ ಮತ್ತು ಶನೀಶ್ವರ ಪೂಜೆ ನಡೆಸಲು ಅನುಮತಿ ನೀಡಿದೆ.
ಭಜನಾ ಕಾರ್ಯಕ್ರಮ ಮತ್ತು ಶನೀಶ್ವರ ಪೂಜೆ ನಡೆಸಲು ಹೈಕೋರ್ಟ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಮೂಲಕ ಕಾರ್ಯಕ್ರಮ ನಡೆಸಬಾರದು ಎಂದಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡರಿಗೆ ಮುಖಭಂಗವಾಗಿದೆ.