Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ, ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ: 34 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ..!!!

September 21, 2022
in ರಾಜಕೀಯ, ರಾಜ್ಯ
0
ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ, ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ: 34 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ ಮತ್ತು ಲವ್ ಜಿಹಾದ್ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಕೋಮುದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಜಗದೀಶ ಕಾರಂತ್ ಹಾಗೂ ಕೆಲವು ಹಿಂದುತ್ವ ಸಂಘಟನೆಗಳ ಪ್ರಮುಖರ ವಿರುದ್ಧ ದಾಖಲಾಗಿದ್ದ ಒಟ್ಟು 34 ಮೊಕದ್ದಮೆಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

Advertisement
Advertisement
Advertisement

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮತ್ತು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಈ ಮೊಕದ್ದಮೆಗಳನ್ನು ಹಿಂಪಡೆಯಬಾರದು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಅಭಿಯೋಗ ಹಾಗೂ ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಅಭಿಪ್ರಾಯ ನೀಡಿದ್ದವು. ಆದರೂ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ. ಈ ಪೈಕಿ, ರೈತರಿಗೆ ಸಂಬಂಧಿಸಿದ ಕೆಲವು ಪ್ರಕರಣಗಳಿವೆ.

ಈ ಕುರಿತಂತೆ ಸೆ.19 ರಂದು ನಡೆದ ಸಚಿವ ಸಂಪುಟ ಸಭೆಗೆ ಒಳಾಡಳಿತ ಇಲಾಖೆ ಮಂಡಿಸಿದ್ದ 47 ಪುಟಗಳ ಕಡತ ಲಭ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಸಚಿವರು, ಶಾಸಕರು ಮೊಕದ್ದಮೆಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು.

Advertisement

ಆಗಸ್ಟ್ 2 ರಂದು ನಡೆದ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮೊಕದ್ದಮೆಗಳನ್ನು ಹಿಂಪಡೆಯುವ ಕುರಿತಂತೆ 46 ಮೊಕದ್ದಮೆಗಳನ್ನು ಒಳಗೊಂಡ 27 ಕಡತಗಳನ್ನು ಪರಿಶೀಲಿಸಲಾಗಿತ್ತು. ಈ ಯಾವುದೇ ಮೊಕದ್ದಮೆಗಳು ಹಿಂಪಡೆಯಲು ಸೂಕ್ತ ಅಲ್ಲ ಎಂದು ಪೊಲೀಸ್ ಇಲಾಖೆ, ಅಭಿಯೋಗ ಇಲಾಖೆ ಹಾಗೂ ಕಾನೂನು ಇಲಾಖೆ ಅಭಿಪ್ರಾಯ ನೀಡಿದ್ದವು. ಆದರೆ, ಸಿಆರ್‌ಪಿಸಿ 321ರ ಅಡಿಯಲ್ಲಿ
(ನ್ಯಾಯಾಲಯದಲ್ಲಿರುವ ಮೊಕದ್ದಮೆಗಳನ್ನು ಹಿಂಪಡೆಯುವ ಅಧಿಕಾರ ಅಭಿಯೋಜಕರಿಗೆ ಮಾತ್ರ) 34 ಮೊಕದ್ದಮೆಗಳನ್ನು ಹಿಂಪಡೆಯುವುದು ಸೂಕ್ತ ಎಂದು ಸಂಪುಟ ಸಭೆಗೆ ಉಪ ಸಮಿತಿ ಶಿಫಾರಸು ಮಾಡಿತ್ತು.

ಕೆಲವು ಮೊಕದ್ದಮೆಗಳು:

ಹಿಂದೂ-ಮುಸ್ಲಿಂ ಗಲಭೆ ಉಂಟು ಮಾಡಲು ಮೆರವಣಿಗೆ ನೆಪದಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಲ್ಲಿ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ದಾಖಲಾಗಿದ್ದ ಮೊಕದ್ದಮೆಯನ್ನು ವಾಪಸು ಪಡೆಯುವಂತೆ ಶಾಸಕ ಕೆ.ಜಿ. ಬೋಪಯ್ಯ ಮನವಿ ಮಾಡಿದ್ದರು.

ರಾಷ್ಟ್ರೀಯ ಹೆದ್ದಾರಿ 4ನ್ನು ಬಂದ್ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯಲ್ಲಿ ಹಾವೇರಿಯ ಕುಮಾರಪಟ್ಟಣಂ ಠಾಣೆಯಲ್ಲಿ 2018ರಲ್ಲಿ ರೈತರ ಮೇಲೆ ದಾಖಲಾದ ಪ್ರಕರಣವನ್ನೂ ವಾಪಸು ಪಡೆಯಲು ಮುಖ್ಯಮಂತ್ರಿ ಮತ್ತು ರೈತ ಸಂಘದವರು ಮನವಿ ಸಲ್ಲಿಸಿದ್ದರು.

ಹಲಗೇರಿ ಠಾಣೆಯಲ್ಲಿ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಾಂಧಲೆ ನಡೆಸಿದ ಘಟನೆ ಸಂಬಂಧಿಸಿದಂತೆ 2016ರಲ್ಲಿ ಹಾಗೂ ಹೊಲಗಳಿಗೆ ನೀರು ನುಗ್ಗಿದೆ ಎಂದು ಆರೋಪಿಸಿ ರಸ್ತೆ ಅಡ್ಡಗಟ್ಟಿದ ರೈತರ ಮೇಲೆ 2018ರಲ್ಲಿ ದಾಖಲಾದ ಮೊಕದ್ದಮೆಗಳನ್ನು ವಾಪಸು ಪಡೆಯಲು ಸ್ಥಳೀಯ ಶಾಸಕ ಅರುಣ್ ಕುಮಾರ್ ಆಗ್ರಹಿಸಿದ್ದರು.

ಹಿಂದಕ್ಕೆ ಪಡೆದ ಪ್ರಮುಖ ಮೊಕದ್ದಮೆಗಳು

  • ಹಾವೇರಿಯಲ್ಲಿ ಹಲಗೇರಿ ಠಾಣೆಯಲ್ಲಿ 2015ರಲ್ಲಿ ಎರಡು ಕೋಮುಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ಮೇಲಿನ ಮೊಕದ್ದಮೆ- ಗೃಹ ಸಚಿವ ಜ್ಞಾನೇಂದ್ರ ಮನವಿ
  • ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಿದ ಆರೋಪದಲ್ಲಿ 2017ರಲ್ಲಿ ಮೈಸೂರು ಜಿಲ್ಲೆಯ ಇಲವಾಲ ಠಾಣೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮೇಲೆ ದಾಖಲಾದ ಮೊಕದ್ದಮೆ-ಸಚಿವ ಜೆ.ಸಿ. ಮಾಧುಸ್ವಾಮಿ ಮನವಿ
  • ಹಿಂದೂ ಜಾಗರಣ ವೇದಿಕೆಯ ಶಿವಾನಂದ ಮಲ್ಲಪ್ಪ ಬಡಿಗೇರ ಮತ್ತು ಇತರ ಎಂಟು ಮಂದಿಯ ಗಡಿಪಾರು ವಿರೋಧಿಸಿ ಮುಧೋಳ ಚಲೋ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಜಗದೀಶ ಕಾರಂತ್ ಮತ್ತು ಸ್ಥಳೀಯ ಕಾರ್ಯಕರ್ತನ ವಿರುದ್ಧ ಮುಧೋಳ ಠಾಣೆಯಲ್ಲಿ 2017ರಲ್ಲಿ ದಾಖಲಾದ ಮೊಕದ್ದಮೆ– ಸಚಿವ ಎಸ್. ಅಂಗಾರ ಮನವಿ
  • ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಗುಂಡಿಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಸುಳ್ಯ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಡಿ.ವಿ. ಲೀಲಾಧರ, ಸುಬ್ರಹ್ಮಣ್ಯ ಉಪಾಧ್ಯಾಯ, ಕೆ.ಪಿ. ಜಗದೀಶ ಮತ್ತು ಜಗದೀಶ ಕಾರಂತ್ ವಿರುದ್ಧ 2013ರಲ್ಲಿ ದಾಖಲಾದ ಮೊಕದ್ದಮೆ- ಸಚಿವ ಎಸ್. ಅಂಗಾರ ಮನವಿ
  • ದೊಡ್ಡಬಳ್ಳಾಪುರದಲ್ಲಿ ಲವ್ ಜಿಹಾದ್ ವಿರುದ್ಧದ ಪ್ರತಿಭಟನೆ ವೇಳೆ ಪೊಲೀಸರನ್ನು ನಿಂದಿಸಿದ ಆರೋಪದಡಿ ಜಗದೀಶ ಕಾರಂತ್ ವಿರುದ್ಧ 2011ರಲ್ಲಿ ದಾಖಲಾದ ಮೊಕದ್ದಮೆ- ಸಚಿವ ಎಸ್. ಅಂಗಾರ ಮನವಿ
  • ಶಿರಾದಲ್ಲಿ ಹಿಂದೂ ಜನ ಜಾಗೃತಿ ಸಮಾವೇಶದಲ್ಲಿ ದ್ವೇಷ ವೈಷಮ್ಯದ ಭಾಷಣ ಮಾಡಿದ ಆರೋಪದಲ್ಲಿ 2009ರಲ್ಲಿ ಜಗದೀಶ ಕಾರಂತ್ ವಿರುದ್ಧ ದಾಖಲಾದ ಮೊಕದ್ದಮೆ- ಸಚಿವ ಎಸ್. ಅಂಗಾರ ಮನವಿ

Previous Post

(ಸೆ.24) ಪುತ್ತೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿ ‘ರೈತ ಸೌಧ’ ಉದ್ಘಾಟನಾ ಸಮಾರಂಭ

Next Post

ವಿಟ್ಲ: ಚಂದಳಿಕೆ ಶಾಲೆಯಲ್ಲಿ “ಉತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರಾದ ವಿಶ್ವನಾಥ ಗೌಡ ರವರಿಗೆ ಅಭಿನಂದನಾ ಕಾರ್ಯಕ್ರಮ

OtherNews

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

June 27, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

June 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.