ಬಂಟ್ವಾಳ: ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಇಂದು ಮುಂಜಾನೆ ವೇಳೆಯಲ್ಲಿ ಎಸ್ಡಿಪಿಐ ಮುಖಂಡ ಬೋಳಂತೂರು ನಿವಾಸಿ ಮಹಮ್ಮದ್ ತಬ್ಸೀರ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ವಿಟ್ಲ ಪೇಟೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಎಸ್ಡಿಪಿಐ ಮುಖಂಡ ತಬ್ಸೀರ್ ನನ್ನು ವಶಕ್ಕೆ ಪಡೆದುದ್ದನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹಲವಾರು ಮಂದಿ ಸ್ಥಳದಲ್ಲಿ ಜಮಾವಣೆಗೊಂಡಿದ್ದಾರೆ.
ಕೆ.ಜೆ. ಹಳ್ಳಿ- ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ತಬ್ಸೀರ್ ಗೆ ನಂಟು ಇದೆ ಎಂದು ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.