ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಪತನಗೊಂಡಿದೆ.
ವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಬುಧವಾರ ಬೆಳಗ್ಗೆ ದಿನನಿತ್ಯದ ವಿಹಾರದ ವೇಳೆ ಪತನಗೊಂಡಿತು.
ಇಬ್ಬರೂ ಪೈಲಟ್ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಎರಡನೇ ಪೈಲಟ್ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ವಿವರಗಳು ಖಚಿತಪಡಿಸಲಾಗುತ್ತಿದೆ, ಎಂದು ಅಧಿಕೃತ ಹೇಳಿಕೆಗಳು ತಿಳಿಸಿದೆ.


























