ಪುತ್ತೂರು: ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದಶಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಟ್ರಸ್ಟ್ ನ ಫಲಾನುಭವಿಗಳ ಸಮಾವೇಶ ಮತ್ತು ವಸ್ತ್ರ ವಿತರಣೆ ಕಾರ್ಯಕ್ರಮವು ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ.26 ರಂದು ನಡೆಯಲಿದ್ದು, ಈ ಕುರಿತು ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸುವ ಸಲುವಾಗಿ ಗ್ರಾಮ ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಲಿದ್ದು, ಅ.16 ರಂದು ಬನ್ನೂರು ಶ್ರೀ ದುರ್ಗಾ ಭಜನ ಮಂಡಳಿ ಕುಂಟ್ಯಾನದಲ್ಲಿ ಟ್ರಸ್ಟ್ ನ ಪ್ರವರ್ತಕರಾದ ಅಶೊಕ್ ಕುಮಾರ್ ರೈ ಕೋಡಿಂಬಾಡಿ ಯವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.


ಸಭೆಯಲ್ಲಿ ಟ್ರಸ್ಟ್ ನ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಟ್ರಸ್ಟ್ ನ ಪ್ರವರ್ತಕರಾದ ಆಶೋಕ್ ಕುಮಾರ್ ರೈ ಕೋಡಿಂಬಾಡಿ ಯವರು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಆಮಂತ್ರಣ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು , ಜಯಪ್ರಕಾಶ್ ಬದಿನಾರು , ರಮೇಶ್ ರೈ ನೆಲ್ಲಿಕಟ್ಟೆ , ಡೆನ್ನಿಸ್ ಮಾಸ್ಕರೇನಸ್ , ಚಂದ್ರ , ಹುಕ್ರಪ್ಪ ಕುಲಾಲ್ , ಭವ್ಯ , ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
































