ಪುತ್ತೂರು: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ.16 ರಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರಲಾಗಿದ್ದು, ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ.

ರೈಲಿನಡಿ ಬಿದ್ದ ಯುವಕನನ್ನು ಉತ್ತರ ಪ್ರದೇಶ ಮೂಲದವನು ಎನ್ನಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಕಾಲು ಜಾರಿ ಬಿದ್ದನೇ ಎಂಬ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ..



























