ಪುತ್ತೂರು: ಕೆಲ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ರವರ ಕನಸಿನ ಮನೆಯ ಭೂಮಿ ಪೂಜೆ ಕಾರ್ಯಕ್ರಮವು ನ.2 ರಂದು ನಡೆಯಲಿದೆ.
ಪ್ರವೀಣ್ ನೆಟ್ಟಾರು ರವರ ಮನೆಯವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ನೂತನ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದ್ದು, ಮುಗ್ರೋಡಿ ಕನ್ಸ್ಟ್ರಕ್ಷನ್ ರವರಿಗೆ ಮನೆ ನಿರ್ಮಾಣದ ಕಾಂಟ್ರಾಕ್ಟ್ ಕೂಡ ಕೊಡಲಾಗಿದೆ..
ಭೂಮಿ ಪೂಜೆ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ಸುಳ್ಯ ತಾಲೂಕು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಹಾಗೂ ಮತ್ತಿತರ ಪ್ರಮುಖರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..