ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ ಇಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಆರ್. ಅಮನ್ ರಾಜ್ (ರಾಜೇಶ್ ಮತ್ತು ಅಶ್ವಿನಿ ರಾಜೇಶ್, ಪುತ್ತೂರು ದಂಪತಿಯ ಪುತ್ರ) ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆ ಕಾರ್ಕಳ ಮಿಯಾರ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ನಿಖಿಲ್ .ಬಿ.ಕೆ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗ ಸಮಗ್ರದೊಂದಿಗೆ 7ನೇ ತರಗತಿ ವಿದ್ಯಾರ್ಥಿಗಳಾದ ತಾರುಣ್ಯ ಕೆ.ಎಸ್-ಇಂಗ್ಲೀಷ್ ಕಂಠಪಾಠ ಪ್ರಥಮ ( ಕೆ.ಶ್ರೀನಾಥ್ ಮತ್ತು ಚಿತ್ರಾವತಿ ಸಿ.ಕೆ ದಂಪತಿ ಪುತ್ರಿ), ಅಜಿತೇಶ್ .ಜೆ.ಎನ್ –ಕ್ಲೇ ಮಾಡೆಲಿಂಗ್ ಪ್ರಥಮ (ಜತ್ತಪ್ಪ ಗೌಡ ಮತ್ತು ಬೇಬಿರೇಖಾ ದಂಪತಿ ಪುತ್ರ), ಧ್ಯಾನ್ ರೈ .ಜಿ 6ನೇ ತರಗತಿ ಕಥೆ ಹೇಳುವುದು ಪ್ರಥಮ (ಹರಿಪ್ರಸಾದ್ ರೈ .ಜಿ ಮತ್ತು ಪ್ರಶಾಂತಿ .ಪಿ ದಂಪತಿ ಪುತ್ರ) ರಿಷಿಕಾ .ಸಿ.ಕೆ 8ನೇ ತರಗತಿ-ಚಿತ್ರಕಲೆ ಪ್ರಥಮ ( ಚರಣ್ ಕುಮಾರ್ ಮತ್ತು ಮಾಲತಿ ದಂಪತಿ ಪುತ್ರ) ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಮಾಲ ವಿ.ಎನ್. ತಿಳಿಸಿದ್ದಾರೆ. ಇವರಿಗೆ ಶಾಲಾ ಅಧ್ಯಕ್ಷರು, ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.