ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.
ಮುಂಡಾಜೆ ಸಮೀಪದ ಅಣಿಯೂರಿನ ನೋಣಯ್ಯ ಗೌಡ ಎಂಬವರ ಪುತ್ರ ಪ್ರದೀಪ್ ಗೌಡ (22) ಮೃತ ಬೈಕ್ ಸವಾರ.
ಪ್ರದೀಪ್ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ಅತ್ತ ತೆರಳುತ್ತಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..