ಸುಳ್ಯ: ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪಶ್ಚಿಮ ಬಂಗಾಳದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಟ್ಟು ಪರಾರಿಯಾಗಿದ್ದು, ಇದೀಗ ಆರೋಪಿ ಇಮ್ರಾನ್ ಶೇಖ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿಟ್ಟಿದ್ದ ಇಮ್ರಾನ್ ತನ್ನ ಊರಿಗೆ ಹೋಗಿದ್ದು, ಅಲ್ಲಿಯ ಪೊಲೀಸರ ಸಹಾಯ ಪಡೆದು ಸುಳ್ಯ ಪೊಲೀಸರು ಆತನನ್ನು ನ.24 ರಂದು ಸಂಜೆ ಸುಳ್ಯಕ್ಕೆ ಕರೆತಂದಿರುವುದಾಗಿ ತಿಳಿದು ಬಂದಿದೆ.
ಆತನನ್ನು ಪುತ್ತೂರು ನ್ಯಾಯಾಲಯಕ್ಕೆ ಕರೆ ತಂದು ಹಾಜರು ಪಡಿಸಲಾಗಿದೆ ಎಂದು ವರದಿಯಾಗಿದೆ..