ಬೆಳ್ತಂಗಡಿ: ನಿರೂಪಕಿ ಪ್ರಜ್ಞಾ ಓಡಿಲ್ನಾಳ ರವರ ತಂದೆ ಸಂಜೀವ ಪೂಜಾರಿ ಬಡೆಕ್ಕಿನ ರವರು ನ.27 ರಂದು ನಿಧನರಾದರು.
ಕೆಲ ಸಮಯದಿಂದ ಅನಾರೋಗ್ಯದಿಂದಿದ್ದ ಅವರು ನ.27 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಪುತ್ರರಾದ ರಾಜೇಶ್, ಪ್ರಜ್ವಲ್, ಪುತ್ರಿ ಪ್ರಜ್ಞಾ ಓಡಿಲ್ನಾಳ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತ ಹಲವು ಗಣ್ಯರು ಆಗಮಿಸಿ ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತರ ಉತ್ತರಕ್ರಿಯೆಯು ಡಿ.9 ರಂದು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.