ಚಿಕ್ಕಮಗಳೂರು: ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಬುಧವಾರ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠ ಅನುಮತಿಸಿದೆ.
ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು, ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.