ವಿಟ್ಲ: ಟಿಪ್ಪರ್ ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ನಿನ್ನೆ ಸಂಜೆ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಬೈಕ್ ಸವಾರನನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ (26) ಎಂದು ಗುರುತಿಸಲಾಗಿದೆ.
ಮನೋಜ್ ರವರು ಅಮರ್ ಕನ್ಸ್ಟ್ರಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.