ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಡಿ.10 ರಂದು ತೃತೀಯ ವರ್ಷ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಬೆಳ್ಳಾರೆ ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ವಿ ಸೂರ್ಯನಾರಾಯಣ್ ರವರು ದೀಪ ಪ್ರಜ್ವಲಿಸಿ, ಬೀಳ್ಕೋಡುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಕಿವಿಮಾತುಗಳ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಬೀಳ್ಕೋಡುವ ಎಲ್ಲಾ ವಿದ್ಯಾರ್ಥಿಗಳೂ ಕೆಲಸ ಪಡೆದಿರುವುದು ಹಾಗೂ ಈ ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿ, ವಿದ್ಯಾಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಅರಣ್ಯಾಧಿಕಾರಿ ಕೃಷ್ಣಪ್ಪ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿಯಾದ ಕಲಾವತಿ, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಯಾದ ಅರ್ಪಿತ್ ಟಿ. ಎ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಗನ್ ದೀಪ್ ಎ, ಬಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಗನ್ ದೀಪ್ ಎ.ಬಿ ಸ್ವಾಗತಿಸಿ, ವಿದ್ಯಾರ್ಥಿನಿ ಸೃಷ್ಟಿ ಹೆಚ್.ಜಿ ವಂದಿಸಿದರು. ವಿದ್ಯಾರ್ಥಿನಿ ಪ್ರಗತಿ ಕೆ.ಎಚ್, ರವರು ಕಾರ್ಯಕ್ರಮವನ್ನು ನಿರೂಪಿಸಿದರು..




