ಬಂಟ್ವಾಳ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ( ರಿ) ಬೆಳ್ತಂಗಡಿ ಇದರ 3ನೇ ಕಲ್ಲಡ್ಕ ಶಾಖೆಯು 9 ವರ್ಷಗಳನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಸಂಘದ ಅತ್ಯುತ್ತಮ ಬೆಳವಣಿಗೆಗೆ ಕಾರಣರಾದ ಗ್ರಾಹಕರೊಂದಿಗೆ ಡಿ.20 ರಂದು ‘ಗ್ರಾಹಕರೊಂದಿಗೆ ಒಂದು ದಿನ’ ಕಾರ್ಯಕ್ರಮ ಕಲ್ಲಡ್ಕ ಶಾಖಾ ಕಚೇರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು, ನಿರ್ದೇಶಕರುಗಳು, ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಉಪಸ್ಥಿತರಿರಲಿದ್ದಾರೆ.
ಬ್ಯಾಂಕ್ ನ ಸದಸ್ಯರು ಹಾಗೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕಲ್ಲಡ್ಕ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..
