ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ -ವಾರ್ಷಿಕೋತ್ಸವ 2022-23 ಜ.4 ರಂದು ಸಂಜೆ 5.15ರಿಂದ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಎಸ್. ಜಯರಾಮ ಕೆದಿಲಾಯ ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಕೆ. ಸುಧಾಕರ ಪುತ್ತೂರಾಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪುತ್ತೂರು ಕ್ಷೇತ್ರ ಶಿಕ್ಷೆಣಾಧಿಕಾರಿಗಳಾದ ಲೋಕೇಶ್ ಎಸ್.ಆರ್., ಕೃಷಿಕರಾದ ಬಾಗಲಕೋಟೆ ಮುಧೋಳದ ಬಾಬು ಗೌಡ ಪಾಟೀಲ್, ಬೆಳ್ಳಾರೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಜಗದೀಶ್ ಪಿ.ಎಸ್., ಪುರುಷರಕಟ್ಟೆ ಗುರುಕುಲ ಕಲಾ ಕೇಂದ್ರದ ನಿರ್ದೇಶಕಿ ಗುರುಪ್ರಿಯಾ ನಾಯಕ್ ರವರು ಆಗಮಿಸಲಿದ್ದಾರೆ.
ಮಕ್ಕಳಿಂದ ಸಾಂಸ್ಕೃತಿಕ ಮತ್ತು ಸಾಹಸ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..









