ಸುಳ್ಯ: ಐವರ್ ನಾಡು ಗ್ರಾಮದ ದೇವರ ಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.14 ರಂದು ಪ್ರತಿಭಾ ದಿನಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರ, ಎ.ವಿ ತೀರ್ಥರಾಮ, ಬಾಲಕೃಷ್ಣ ಕೀಲಾಡಿ, ನವೀನ್ ಸಾರಕೆರೆ ಮತ್ತು ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ಮತ್ತು ಶ್ರೀರಾಮ ಗೋಶಾಲೆ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಸ್ಥೆ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಕಾರ್ಯಕ್ರಮದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ, 50 ಪುಸ್ತಕ, 50 ಹಣ್ಣಿನ ಗಿಡಗಳನ್ನು ನೀಡುವ ಮೂಲಕ ಶಿಕ್ಷಕಿಯಾದ ಸಂಪ್ರೀತ ರವರಿಗೆ ಸನ್ಮಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರದೀಪ್, ಕಾರ್ಯದರ್ಶಿಯಾದ ಮಹಾಂತೇಶ್ ಡಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕರಾದ ಮಂಜುನಾಥ್ ಶಾಂತಿಮೂಲೆ ಶ್ರೀರಾಮ ಗೋಶಾಲೆಯ ಅಧ್ಯಕ್ಷರಾದ ಸೋಮಪ್ರಸಾದ್ ರೈ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೇಣಾಲ ಮತ್ತು ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
