ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಇಂದು ಬಿಡುಗಡೆಯಾಗಲಿದೆ.
ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ರೈತರ ಖಾತೆಗೆ ಬಿಡುಗಡೆ ಮಾಡಿದ್ದು, ಈ ಯೋಜನೆಯ ಭಾಗವಾಗಿ ಇದುವರೆಗೆ 10 ಕೋಟಿಗೂ ಹೆಚ್ಚು ರೈತರು 12 ಕಂತುಗಳನ್ನು ಪಡೆದಿದ್ದಾರೆ.
ಯೋಜನೆಯ ಭಾಗವಾಗಿ ವಾರ್ಷಿಕ 6 ಸಾವಿರ ರೂಪಾಯಿ ರೈತರ ಖಾತೆಗೆ ಕಳುಹಿಸಲಾಗುತ್ತಿದೆ. ಈ ಮೊತ್ತವನ್ನು ಪ್ರತಿ 4 ತಿಂಗಳಿಗೊಮ್ಮೆ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಮೂರು ಕಂತುಗಳಲ್ಲಿ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.
ಮೊದಲು ಇ-ಕೆವೈಸಿ, ಭೂಮಿಯ ವಿವರಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಲಾಗಿದೆಯೇ ಎಂದು ಪರಿಶೀಲಿಸಿ. ಇದು ಭರ್ತಿ ಮಾಡಿದ್ದರೆ 13ನೇ ಕಂತು ಖಂಡಿತವಾಗಿಯೂ ನಿಮ್ಮ ಖಾತೆಗೆ ಬರುತ್ತದೆ. ಏಕೆಂದರೆ ಪಿಎಂ ಕಿಸಾನ್ ಯೋಜನೆಯಲ್ಲಿ ವಂಚನೆಯನ್ನು ತಡೆಗಟ್ಟಲು ಕೇಂದ್ರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಪಿಎಂ ಕಿಸಾನ್ ಯೋಜನೆಯ ಇತ್ತೀಚಿನ ಕಂತು ಪಡೆಯಲು ಜಮೀನು ವಿವರಗಳನ್ನು ಪರಿಶೀಲನೆ ಮತ್ತು ಇ-ಕೆವೈಸಿ ಮಾಡಿಸಿಕೊಳ್ಳುವುದು ಅವಶ್ಯಕವಾಗಿದೆ.
ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ ನೀವು ಅಧಿಕೃತ ಇಮೇಲ್ ಐಡಿಯಲ್ಲಿ ಸಂಪರ್ಕಿಸಬಹುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದಾಗಿದೆ..