ಪುತ್ತೂರು : ಪುಣ್ಚಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ
95ನೇ ವರ್ಷದ ‘ವಾರ್ಷಿಕ ಹಬ್ಬ’ ‘ಪಂಚನವತಿ ಸಂಭ್ರಮ’ ಡಿ.31 ರಂದು ನಡೆಯಲಿದೆ.
ಸಂಜೆ 4 ಗಂಟೆಗೆ ಊರಿನ ಹಿರಿಯರಾದ ಪಿಡಿ ಕೃಷ್ಣಕುಮಾರ್ ರೈ ರವರ ಅಧ್ಯಕ್ಷತೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಗಾಯತ್ರಿ
ಓಂತಿಮನೆರ ವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪುಣ್ಚಪ್ಪಾಡಿ ಅಂಗನವಾಡಿ ಮಕ್ಕಳಿಂದ ನೃತ್ಯ ವೈಭವ ನಡೆಯಲಿದೆ.
ಸಂಜೆ 5 ಗಂಟೆಯಿಂದ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಚಿವ ಎಸ್. ಅಂಗಾರ ರವರು
ಉದ್ಘಾಟಿಸಲಿದ್ದಾರೆ. ಸವಣೂರು ಗ್ರಾ.ಪಂ, ಅಧ್ಯಕ್ಷೆ ರಾಜೀವಿ ಶೆಟ್ಟಿ ರವರು ಅಧ್ಯಕ್ಷತೆ ವಹಿಸಲಿದ್ದಾರೆ.
ಗ್ರಾ.ಪಂ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ ರವರು ಮಕ್ಕಳ ಹಸ್ತ ಪ್ರತಿ ಬಿಡುಗಡೆ ಮಾಡಲಿದ್ದಾರೆ.

ಗ್ರಾ.ಪಂ, ಸದಸ್ಯ ಗಿರಿಶಂಕರ್ ಸುಲಾಯ ರವರು ಬಹುಮಾನ
ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯರಾದ ಯಶೋದ ನೂಜಾಜೆ, ಜಯಶ್ರೀ ಕುಚ್ಚೆಜಾಲು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಸಮನ್ವಯಾಧಿಕಾರಿ ನವೀನ್ ವೇಗಸ್, ಸಿ.ಆರ್.ಪಿ. ಕುಶಾಲಪ್ಪ, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೆದು ಮುಂತಾದವರು
ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಳುನಾಡ ವೈಭವ ಶಾಸ್ತ್ರೀಯ ನೃತ್ಯ, ಭಾವ ನೃತ್ಯ, ನಾಟಕ ರೂಪಕ, ಇಂಗ್ಲಿಷ್ ನಾಟಕ, ಹಾಸ್ಯ ನಾಟಕ, ಯೋಗ ಹೀಗೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿದೆ ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಗಾಯತ್ರಿ ಓಂತಿಮನೆ ಹಾಗೂ ಶಾಲಾ ಮುಖ್ಯಶಿಕ್ಷಕಿ ರಶ್ಮಿತಾ ನರಿಮೊಗರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
