ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಇದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್ ನಲ್ಲಿರುವ ಮನೆ ಮಹಜರು ನಡೆಸಿತು.

ಬೆಂಗಳೂರಿನಿಂದ ಆಗಮಿಸಿದ್ದ ಎನ್.ಐ.ಎ ಅಧಿಕಾರಿಗಳ ತಂಡ ಗುರುವಾರ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲವು ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಈ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ಕೂಡಾ ವಿಚಾರಣೆ ನಡೆಸಿ ಕೆಲವು ಮಾಹಿತಿಗಳನ್ನು ಸಂಗ್ರಹಿಸಿದೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.


























