ಸುರತ್ಕಲ್: ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ನಡೆದಿದೆ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ.

ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
ಶಾಲೆಗೆಂದು ತಯಾರಾಗುತ್ತಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಹಸೀಮ್ ಕೊನೆಯುಸಿರೆಳೆದಿದ್ದ.



























