ನಟ, ನಿರ್ದೇಶಕ ಗುರುಪ್ರಸಾದ್ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ರನ್ನು ಬಂಧಿಸಲಾಗಿದೆ.
ಶ್ರೀನಿವಾಸ್ ಎಂಬುವವರ ಜತೆ ಗುರುಪ್ರಸಾದ್ ಹಣಕಾಸು ವ್ಯವಹಾರ ನಡೆಸಿದ್ದರು. ಗುರುಪ್ರಸಾದ್ ವಿರುದ್ಧ ವಂಚನೆ ಆರೋಪದಡಿ ಕೇಸ್ ದಾಖಲಾಗಿತ್ತು. ಚೆಕ್ಬೌನ್ಸ್ ಪ್ರಕರಣದಲ್ಲಿ ವಾರಂಟ್ ಹೊರಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ಗುರುಪ್ರಸಾದ್ ಬಂಧನ ಆಗಿದೆ.
2006ರಲ್ಲಿ ತೆರೆಗೆ ಬಂದ ‘ಮಠ’ ಸಿನಿಮಾಗೆ ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಅವರ ನಿರ್ದೇಶನದ ಮೊದಲ ಸಿನಿಮಾ ಇದು. ಈ ಚಿತ್ರದಲ್ಲಿ ಜಗ್ಗೇಶ್ ಮುಖ್ಯ ಪಾತ್ರ ಮಾಡಿದ್ದರು. ಈ ಸಿನಿಮಾ ಯಶಸ್ಸು ಕಂಡಿತು. ಜಗ್ಗೇಶ್ ಹಾಗೂ ಗುರುಪ್ರಸಾದ್ ಕಾಂಬಿನೇಷನ್ನಲ್ಲಿ ಮೂಡಿಬಂದ 2009ರ ‘ಎದ್ದೇಳು ಮಂಜುನಾಥ’ ಸಿನಿಮಾ ಕೂಡ ಯಶಸ್ಸು ಕಂಡಿತು. 2013ರಲ್ಲಿ ‘ಡೈರೆಕ್ಟರ್ ಸ್ಪೆಷಲ್’ ನಿರ್ದೇಶನ ಮಾಡಿದರು. ಇನ್ನೂ ಕೆಲವು ಚಿತ್ರಗಳಿಗೆ ಅವರು ಆ್ಯಕ್ಷನ್ಕಟ್ ಹೇಳಿದ್ದಾರೆ.
\