ಪುತ್ತೂರು: ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ(ರಿ.) ಕೊರತಿಕಟ್ಟೆ ಮಾಡತ್ತಾರು ಕ್ಷೇತ್ರದಲ್ಲಿ ಫೆ.21,22,23 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದೈವಸ್ಥಾನದ ಸಮಿತಿಯ ಕಾರ್ಯದರ್ಶಿಯಾದ ಶಿವಪ್ಪ ನಾಯ್ಕ ಕಾರ್ಲ ಇವರು ಸ್ವಾಗತ ಭಾಷಣ ಮಾಡಿ ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಕಿರಣ್ ಶೆಟ್ಟಿ ಮುಂಡೋವಿನಕೋಡಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಿತಿಯ ಗೌರವಾಧ್ಯಕ್ಷರಾದ ಈಶ್ವರಪ್ರಸನ್ನ ಪೆರ್ನೆಕೋಡಿ ರವರು ಆಮಂತ್ರಣ ಪತ್ರಿಕೆಯನ್ನು ಎಲ್ಲರ ಸಮ್ಮುಖದಲ್ಲಿ ಬಿಡುಗಡೆ ಮಾಡಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಂಪೂರ್ಣ ವಿವರವನ್ನು ಸಭೆಗೆ ತಿಳಿಸಿ ಊರ ಮತ್ತು ಪರವೂರ ಭಕ್ತರ ಸಂಪೂರ್ಣ ಸಹಕಾರವನ್ನು ಯಾಚಿಸಿದರು.
ಸಮಿತಿಯ ಕೋಶಾಧಿಕಾರಿಯಾದ ಕೃಷ್ಣಕುಮಾರ್ ಪೆರ್ನೆಕೋಡಿ ವಂದಿಸಿ, ದೈವಸ್ಥಾನದ ಸಮಿತಿಯ ಸರ್ವ ಸದಸ್ಯರು ಸಂಪನ್ಮೂಲ ಕ್ರೋಢೀಕರಣ ಸಮಿತಿಯ ಸಂಚಾಲಕರು ಸರ್ವ ಸದಸ್ಯರು ಹಾಗೂ ಬ್ರಹ್ಮಕಲಶೋತ್ಸವದ ಉಪಸಮಿತಿಗಳ ಸಂಚಾಲಕರು ಮತ್ತು ಸರ್ವ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.