ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.23 ರಿಂದ 25ರ ವರೆಗೆ ನಡೆಯಲಿದೆ.
ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.25 ರಂದು ಬೆಳಿಗ್ಗೆ 8 ಗಂಟೆಯಿಂದ 108 ಕಾಯಿ ಗಣಹೋಮ ಮತ್ತು ರಾತ್ರಿ 9 ಗಂಟೆಗೆ ಮೂಡಪ್ಪ ಸೇವೆ ಜರುಗಲಿದೆ.
ಜ.23 ರಂದು ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ವೆಂಕಟರಮಣ ರಾವ್ ಮಂಕುಡೆ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪವಿತ್ರ ಗುರುಪ್ರಸಾದ್, ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯರಾದ ಪ್ರಭಾಕರ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ವಿವರ :
‘ಭಕ್ತಿ ಹೆಜ್ಜೆ ಹಾಗೂ ಭಜನಾ ಮಂಗಳೋತ್ಸವ’ : ಜ.23 ರಂದು ಬೆಳಿಗ್ಗೆ ಹರೀಶ್ ನೆರಿಯ ರವರ ನೇತೃತ್ವದಲ್ಲಿ ಜಿಲ್ಲೆಯ ಆಹ್ವಾನಿತ ಭಜನಾ ಮಂಡಳಿಗಳಿಂದ ಕುಣಿತ ಭಜನೆ ನಡೆಯಲಿದೆ.
ಸಂಜೆ ಕಾಮಧೇನು ಗೋಶಾಲೆಯಿಂದ ಶ್ರೀ ಕ್ಷೇತ್ರದ ವರೆಗೆ ‘ಭಜನಾ ಶೋಭಾ ಯಾತ್ರೆ’ ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ನೆರವೇರಿಸಲಿದ್ದಾರೆ.
ಉಜಿರೆ ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ. ಶ್ರೀಧರ ಭಟ್ ರವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸೇವಾ ಭಾರತೀಯ ಅಧ್ಯಕ್ಷರಾದ ವಿನಾಯಕ ರಾವ್ ಕನ್ಯಾಡಿ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಕೆನರಾ ಬ್ಯಾಂಕ್ ಪ್ರಬಂಧಕರಾದ ಅಂಕಿತ್, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಎಂ. ರವರು ಆಗಮಿಸಲಿದ್ದಾರೆ.
ಸಂಜೆ 6 ಗಂಟೆಯಿಂದ ಭಜನಾ ಮಂಗಲೋತ್ಸವ ನಡೆಯಲಿದ್ದು, 7.30 ರಿಂದ ‘ಮೇಘನಾ ಸಾಲಿಗ್ರಾಮ’ ರವರಿಂದ ‘ಸ್ಯಾಕ್ಸೋಫೋನ್ ವಾದನ’ ನಡೆಯಲಿದೆ.
ಜ.24ರಂದು ‘ದುರ್ಗಾ ಪೂಜೆ’, ‘ಯಕ್ಷೋತ್ಸವ’, ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಬರ್ಗುಳ ರವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ವನಜಾಕ್ಷಿ, ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದೀಪಕ್ ರಾಜ್ ಉಪಸ್ಥಿತರಿರಲಿದ್ದಾರೆ.
ಸಂಜೆ ‘ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು’ ರವರಿಂದ ‘ಶ್ರೀ ಹರಿ ದರ್ಶನ’ ‘ಯಕ್ಷಗಾನ ತಾಳಮದ್ದಳೆ’ ನಡೆಯಲಿದೆ.
ಸಂಜೆ 6 ರಿಂದ 7ರವರೆಗೆ ‘ಪ್ರಕಾಶ ದೇವಾಡಿಗ ಮತ್ತು ಬಳಗ’ದವರಿಂದ ‘ಸ್ಯಾಕ್ಸೋಫೋನ್ ವಾದನ’ ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಧನಂಜಯ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಕ್ಕಡ ವಲಯ ಮೇಲ್ವಿಚಾರಕರಾದ ಹರಿಪ್ರಸಾದ್ ಎ., ಧರ್ಮಸ್ಥಳ ಠಾಣಾಧಿಕಾರಿಯಾದ ಅನಿಲ್ ಕುಮಾರ್, ಶ್ರೀ ಕಟೀಲು ದುರ್ಗಾಪರಮೇಶ್ವರಿ ಸೇವ ಟ್ರಸ್ಟ್ ನ ಅಧ್ಯಕ್ಷರಾದ ದಾಮೋದರ ಶೆಟ್ಟಿ ರವರು ಆಗಮಿಸಲಿದ್ದಾರೆ.
ಸಂಜೆ 7.30 ರಿಂದ ‘ಯಕ್ಷ ಭಾರತಿ ರಿ. ಬೆಳ್ತಂಗಡಿ’- ಅತಿಥಿ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಜ.25 ರಂದು ಬೆಳಿಗ್ಗೆ ‘ವಾಮನ ನಾಯಕ್ ಉಪ್ಪಿನಂಗಡಿ’ ರವರ ನೇತೃತ್ವದಲ್ಲಿ ಸ್ಥಳೀಯ ಪ್ರಸಿದ್ಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ.
ಸಂಜೆ 4.30 ರಿಂದ 6.30ರ ವರೆಗೆ ‘ಯಜ್ಞೆಶ್ ಆಚಾರ್ಯ ಸುಬ್ರಹ್ಮಣ್ಯ’ ರವರಿಂದ ‘ಭಕ್ತಿ ರಸಮಂಜರಿ’ ನಡೆಯಲಿದೆ.
ಸಂಜೆ 6.30 ರಿಂದ 7 ಗಂಟೆವರೆಗೆ ಶ್ರೀ ಕ್ಷೇತ್ರ ಸೌತಡ್ಕ ‘ಶಿಶು ಮಂದಿರ’ದ ವಿದ್ಯಾರ್ಥಿಗಳಿಂದ ‘ಚಿಣ್ಣರ ಚಿಲಿಪಿಲಿ’ ಕಾರ್ಯಕ್ರಮ ನಡೆಯಲಿದೆ.
ಸಂಜೆ 7 ರಿಂದ 8.30ರವರೆಗೆ ಧಾರ್ಮಿಕ ಸಭೆ ನಡೆಯಲಿದೆ. ಶಿವಮೊಗ್ಗ ನಟೇಶ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಹರೀಶ್ ಪೂಂಜಾ ರವರು ವಹಿಸಲಿದ್ದಾರೆ.
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಕೆ. ಸೂರ್ಯ ನಾರಾಯಣ ಭಟ್ ರವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿಗಳಾದ ಕೃಷ್ಣಮೂರ್ತಿ, ದ.ಕ. ಮಂಗಳೂರು ಸಹಾಯಕ ಆಯುಕ್ತರಾದ ಗುರುಪ್ರಸಾದ್, ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ರವರು ಆಗಮಿಸಲಿದ್ದಾರೆ.
ರಾತ್ರಿ ರಾಷ್ಟ್ರ ದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ನೃತ್ಯ ನಿರ್ದೇಶನದ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಕಾರ್ಕಳ ನಿರೂಪಣೆಯ ರಾಷ್ಟ್ರ ಮತ್ತು ಧರ್ಮ ಜಾಗೃತಿಯ ‘ಪುಣ್ಯ ಭೂಮಿ ಭಾರತ’ ನೃತ್ಯ ವೈವಿಧ್ಯ ಮೂಡಿ ಬರಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಯಂ. ಹರೀಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..