ಪುತ್ತೂರು: ಮಂಗಳೂರಿನ ಕರಾವಳಿ ಮೈದಾನದಲ್ಲಿ ಜ.22ರಂದು ಅಪರಾಹ್ನ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಿದ್ಧತೆ ನಡೆದಿದೆ.

ದರ್ಬೆಯಲ್ಲಿರುವ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಛೇರಿಯಿಂದ ಬಸ್ ಸೇರಿದಂತೆ ಹಲವು ವಾಹನಗಳಲ್ಲಿ ನೂರಾರು ಮಂದಿ ಮೆರವಣಿಗೆಯಲ್ಲಿ ಮಂಗಳೂರಿಗೆ ತೆರಳುತ್ತಿದ್ದಾರೆ.
ರೈ ಅಭಿಮಾನಿಗಳು ಉತ್ಸುಕತೆಯಿಂದ ಮಂಗಳೂರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ..

























