ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮುಂಡೂರು ಗ್ರಾ.ಪಂ ಸದಸ್ಯ ಅಶೋಕ್ ಕುಮಾರ್ ಪುತ್ತಿಲ ರವರ ತಾಯಿ, ಮುಂಡೂರು ಗ್ರಾಮದ ಪುತ್ತಿಲ ದಿ. ಕೃಷ್ಣಯ್ಯ ರವರ ಪತ್ನಿ ಮಂದಾಕಿನಿ ರವರು ಇಂದು ನಿಧನರಾಗಿದ್ದು, ಅವರ ಮನೆಗೆ ಶಾಸಕ ಸಂಜೀವ ಮಠಂದೂರು ರವರು ಭೇಟಿ ನೀಡಿದರು.
ಮನೆಗೆ ಭೇಟಿ ನೀಡಿದ ಶಾಸಕರು ಅರುಣ್ ಕುಮಾರ್ ಪುತ್ತಿಲ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪ್ರಧಾನ ಕಾರ್ಯದರ್ಶಿ ಯುವರಾಜ್ ಉಪಸ್ಥಿತರಿದ್ದರು.