ಪುತ್ತೂರು: ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕುಂಬ್ರ-ಶೇಖಮಲೆ ಮಸೀದಿ ಬಳಿ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಇನೋವಾ ಕಾರು ಮತ್ತು ಪುತ್ತೂರು ಕಡೆಯಿಂದ ಸುಳ್ಯ ರಸ್ತೆಯಾಗಿ ಬೆಂಗಳೂರು ಕಡೆ ತೆರಳುತ್ತಿದ್ದ ಐರಾವತ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ..