ಪುತ್ತೂರು: ಕೋಟಿ-ಚೆನ್ನಯ ಕಂಬಳಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ಸಾನ್ಯ ಅಯ್ಯರ್ ಅತಿಥಿಯಾಗಿ ಬಂದಿದ್ದು, ಈ ವೇಳೆ ಅವರು ಮುಜುಗರ ಅನುಭವಿಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸಾನ್ಯ ಅಯ್ಯರ್ ವೇದಿಕೆಯಿಂದ ಇಳಿದು ಬರುವ ವೇಳೆ ಅಭಿಮಾನಿಯೊಬ್ಬ ಸೆಲ್ಫಿ ಕೇಳುವ ನೆಪದಲ್ಲಿ ಸಾನ್ಯ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಕೇಳಿ ಬಂದಿದೆ. ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದಾರೆ ಎನ್ನಲಾಗಿದೆ.
ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ನಟಿ ಸಾನಿಯಾ ಅಯ್ಯರ್ ಹಾಗೂ ಸ್ನೇಹಿತರು ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯಮತೀಯ ಯುವಕನೋರ್ವ ಕಿರಿಕಿರಿಯನ್ನುಂಟು ಮಾಡಿದ್ದಾನ್ನೆಲಾಗಿದೆ.
ಶನಿವಾರ ರಾತ್ರಿ ನಡೆದ ಕಂಬಳ ಕೂಟಕ್ಕೆ ಸಾನಿಯಾ ಅತಿಥಿಯಾಗಿ ಆಗಮಿಸಿದ್ದರು. ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಮಾತುಗಳನ್ನು ಆಡಿದ್ದರು. ಸಾನಿಯಾ ‘ ಲವ್ ಯೂ ಪುತ್ತೂರು’ ಎಂದು ಭಾಷಣ ಮಾಡುತ್ತಿದ್ದಂತೆಯೇ ಅಲ್ಲಿಯೇ ಕೂತಿದ್ದ ಅಭಿಮಾನಿ ‘ಐ ಲವ್ ಯೂ ಸಾನಿಯಾ’ ಎಂದು ಪ್ರತಿಯಾಗಿ ಕೂಗಿದ್ದಾನೆ. ಐದಾರು ಬಾರಿ ಈ ರೀತಿ ಆಗಾಗ್ಗೆ ಹೇಳಿದ್ದಾನೆ.
ಸಾನಿಯಾ ಮತ್ತು ಸ್ನೇಹಿತರು ಮತ್ತೆ ಕಂಬಳ ಗದ್ದೆಗೆ ಬಂದ ವೇಳೆ ಅಭಿಮಾನಿ ಎಂದು ಹೇಳಿಕೊಂಡು ಒಂದಿಷ್ಟು ಪುಂಡಕೂಟ ಕಟ್ಟಿಕೊಂಡು ಅನ್ಯಮತೀಯನೊಬ್ಬ ಸೆಲ್ಫಿ ನೆಪದಲ್ಲಿ ಬಂದು ಸಾನಿಯಾರ ಕೈ ಹಿಡಿದಿದ್ದಾನೆ. ಹಾಗೂ ಸ್ನೇಹಿತೆ ಒಬ್ಬಳನ್ನು ಚುಡಾಯಿಸುವ ಪ್ರಯತ್ನ ಮಾಡಿದ್ದಾನೆ.
ಸಾನಿಯಾ ಕೋಪದಿಂದಲೇ ಸೆಲ್ಫಿ ಕೊಡಲು ನಿರಾಕರಿಸಿದ್ದಾರೆ. ಹಾಗೂ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆಯಿಂದ ತೀವ್ರವಾಗಿ ನೊಂದ ನಟಿ ಹಾಗೂ ಆಕೆಯ ಸ್ನೇಹಿತೆಯರು ಕ್ಷಮೆ ಕೇಳುವಂತೆ ಆಗ್ರಹಿಸಿದ್ರು, ಅಷ್ಟರಲ್ಲಿ ಹುಡುಗರ ಈ ನಡೆ ಅಲ್ಲಿದ್ದವರಿಗೆ ಕೋಪ ತರಿಸಿದ್ದು, ಅಲ್ಲದೇ ಆ ಹುಡುಗ ನಶೆಯಲ್ಲಿ ಇದ್ದ ಎಂದು ತಿಳಿಯುತ್ತಿದ್ದಂತೆಯೇ ಅಲ್ಲಿದ್ದವರು ಅವನಿಗೆ ಧರ್ಮದೇಟು ನೀಡಿದ್ದಾರೆ. ಕಂಬಳದಿಂದಲೇ ಅವನನ್ನು ಆಚೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಆದರೇ ಈ ಕುರಿತು ಪೊಲೀಸರಿಗೆ ಯಾರೂ ಮಾಹಿತಿ ನೀಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ.