ಪುತ್ತೂರು: ಕಂಬಳ ಗದ್ದೆಯಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಫೋಟೋ ತೆಗೆದಿದ್ದು, ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅನ್ಯಮತೀಯ ಯುವಕನನ್ನು ಕುರಿಯ ಮೂಲದವ ಎನ್ನಲಾಗಿದೆ.
ಕಂಬಳ ನೋಡಲು ಬಂದ ಹಿಂದೂ ಯುವತಿಯೋರ್ವಳ ಫೋಟೋ ಅನ್ಯಕೋಮಿನ ಯುವಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದಿದ್ದು, ಠಾಣೆಯಲ್ಲಿ ಯುವಕನ ಮೊಬೈಲ್ ಪರಿಶೀಲನೆ ನಡೆಸಿದಾಗ ಇನ್ನು ಹಲವು ಯುವತಿಯರ ಫೋಟೋಗಳು ಮೊಬೈಲ್ ನಲ್ಲಿ ಇರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ, ಯುವಕನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಠಾಣೆಯಿಂದ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಇಂತಹ ಘಟನೆಗಳಿಗೆ ನಡೆಯುವ ಸಂಭವವಿದೆ ಎಂದು ಈ ಮೊದಲೇ ಹಿಂದೂ ಜಾಗರಣ ವೇದಿಕೆ ಆಯೋಜಕರಲ್ಲಿ ಮತ್ತು ವ್ಯವಸ್ಥಾಪನ ಸಮಿತಿಯವರಲ್ಲಿ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದು, ಈಗ ಈ ರೀತಿ ಘಟನೆಗಳು ನಡೆದಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ..