ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ಅಪ್ರಾಪ್ತ ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮೊಬೈಲ್ ನಂಬರ್ ಕೇಳಿದ್ದು, ನಿರಾಕರಿಸಿದಾಗ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಮೀದ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ ರವರು ವಿಚಾರಣೆ ನಡೆಸಿ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಅಪ್ರಾಪ್ತ ಹಿಂದೂ ಯುವತಿಯೋರ್ವಳು ಜ.5 ರಂದು ಸಂಜೆ ವೇಳೆ ಕಾಲೇಜಿನಿಂದ ಮನೆಗೆ ಹೋಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿದ್ದ ವೇಳೆ ಹಫೀದ್ ಎಂಬಾತ ಪ್ರೀತಿಸುವಂತೆ ಒತ್ತಡ ಹಾಕಿದ್ದು, ದೂರವಾಣಿ ಸಂಖ್ಯೆ ಕೇಳಿದಾಗ ನಿರಾಕರಿಸಿದ್ದಕ್ಕೆ, ಅವಳ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾಗಿ ದೂರು ದಾಖಲಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕಲಂ: 354(ಬಿ),506 ಐಪಿಸಿ, ಕಲಂ:12 ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.