ಸುಬ್ರಹ್ಮಣ್ಯ: ಕಲ್ಲುಗುಂಡಿಯ ಅನ್ಯಕೋಮಿನ ಯುವಕನೊಬ್ಬ ಸುಬ್ರಹ್ಮಣ್ಯದ ಹಿಂದೂ ಹುಡುಗಿ ಜೊತೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಭೇಟಿಯಾಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣಕ್ಕೆ ಬಂದ ತಂಡವೊಂದು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಠಾಣೆಗೆ ದೂರು ನೀಡಿದ ಹಿನ್ನೆಲೆ, ಬಂಧಿತರಾದ ಇಬ್ಬರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಬಂಧಿತರಾದ ರಾಧಾಕೃಷ್ಣ ಮತ್ತು ವಿಶ್ವಾಸ್ ರವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸರಿತಾ ರವರು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಆರೋಪಿಗಳ ಪರವಾಗಿ ಕಿಶೋರ್ ಕುಮಾರ್ ಮಂಗಳೂರು,ಚಿನ್ಮಯ್ ರೈ ಈಶ್ವರಮಂಗಲ ಮತ್ತು ಹರೀಶ್ ಬೂಡುಪನ್ನೆ ವಾದಿಸಿದರು.